Search


ಜಿರಳೆ ಪಾರ್ಟಿ ಸಂಸ್ಥಾಪಕ ಭಾರತಕ್ಕೆ, ದೆಹಲಿಯಲ್ಲಿ ದೊಡ್ಡ ಪ್ರತಿಭಟನೆಗೆ ಕರೆ.. ಕೇಂದ್ರ ಸರ್ಕಾರಕ್ಕೆ ನಡುಕ..!

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಕಾಕ್ರೋಚ್‌ ಜನತಾ ಪಾರ್ಟಿಯ (Cockroach Janta Party) ಸಂಸ್ಥಾಪಕ ಅಭಿಜೀತ್‌ ದೀಪ್ಕೆ, ಅಮೆರಿಕಾದಿಂದ ಭಾರತಕ್ಕೆ ಮರಳುತ್ತಿದ್ದು. ಇದೇ ಜೂನ್‌ 6ನೇ ತಾರೀಕು ದೆಹಲಿಯಲ್ಲಿ ಬೃಹತ್‌ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಹೊಸದಾಗಿ ಸ್ಥಾಪಿಸಲಾದ ಸಿಜೆಪಿ ಸ್ಥಾಪಕ ದೀಪ್ಕೆ ಜೂ.6 ರಂದು ಭಾರತಕ್ಕೆ ಹಿಂತಿರುಗಿ, ಪರೀಕ್ಷೆಗೆ ಸಂಬಂಧಿಸಿದ ದೋಷಗಳಿಗಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.  ಇನ್‌ಸ್ಟಾಗ್ರಾಮ್‌ನಲ್ಲಿ ಬಿಡುಗಡೆ ಮಾಡಿದ ವೀಡಿಯೋದಲ್ಲಿ ದೀಪ್ಕೆ, ದೆಹಲಿಯಲ್ಲಿ ನಡೆಯಲಿರುವ ತಮ್ಮ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಬೆಂಬಲಿಗರು ಮತ್ತು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಜೂ.6 ರಂದು ವಿಮಾನ ನಿಲ್ದಾಣದಲ್ಲಿ ತಮ್ಮೊಂದಿಗೆ ಸೇರುವಂತೆ ಬೆಂಬಲಿಗರಿಗೆ ತಿಳಿಸಿದ್ದಾರೆ

ಭಾರತದ ಸಂವಿಧಾನದ ಮಾರ್ಗವನ್ನು ಅನುಸರಿಸಿ ನಾವೆಲ್ಲರೂ ಒಗ್ಗೂಡಿ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಲು ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಸಮಯ ಬಂದಿದೆ. ನಾವು ಒಟ್ಟಾಗಿ ಧ್ವನಿ ಎತ್ತಿದರೆ, ಅವರು ಖಂಡಿತವಾಗಿಯೂ ನಮ್ಮ ಮಾತನ್ನು ಕೇಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

AI-generated image/Cockroach Janta Party A staged political-style press conference scene featuring a human-like figure with a cockroach head wearing a dark suit and tie, standing behind a sleek podium with microphones. The podium and backdrop display the name “Cockroach Janta Party” alongside a cockroach emblem in orange, white, and green". It has been made using AI

ನಾನು ಶನಿವಾರ ಬೆಳಿಗ್ಗೆ ದೆಹಲಿಗೆ ಬರಲು ಎಂದು ನಿರ್ಧರಿಸಿದ್ದೇನೆ. ದಯವಿಟ್ಟು ವಿಮಾನ ನಿಲ್ದಾಣದಲ್ಲಿ ನನ್ನೊಂದಿಗೆ ಸೇರಿ ಮತ್ತು ನಾವು ಒಟ್ಟಿಗೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಹೋಗಿ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ಕೇಳೋಣ ಎಂದಿದ್ದಾರೆ.ಪರೀಕ್ಷೆಯಲ್ಲಾದ ಲೋಪಗಳು ಮತ್ತು ವಿವಾದಗಳಿಂದಾಗಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ವೀಡಿಯೋದಲ್ಲಿ ದೀಪ್ಕೆ ಗಂಭೀರ ಆರೋಪ ಮಾಡಿದ್ದಾರೆ.

By Ravikumar - 01-06-2026


Ads in Post