Search


ಮೋದಿ ಸರ್ಕಾರದಲ್ಲಿ ಮಹತ್ವದ ಬದಲಾವಣೆ : ರಾಜ್ಯ ಬಿಜೆಪಿಗೆ ನೂತನ ಅಧ್ಯಕ್ಷರ ಆಗಮನ..!

ನವದೆಹಲಿ: ರಾಜ್ಯದಲ್ಲಿ ನೂತನ ಸಿಎಂ ಆಯ್ಕೆಯಾಗುತ್ತಿರುವ ಬೆನ್ನಲ್ಲೇ, ಅತ್ತ ಕೇಂದ್ರ ಸರ್ಕಾರದಲ್ಲೂ ದೊಡ್ಡ ಬದಲಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಕೇಂದ್ರ ಸಚಿವ ಸಂಪುಟದ ಪುನರ್‌ ರಚನೆಗೆ ಮೋದಿ ಕೈ ಹಾಕಿದ್ದು, ಡಜನ್‌ಗೂ ಹೆಚ್ಚು ಸಚಿವರು ತಮ್ಮ ಮಂತ್ರಿಗಿರಿಯನ್ನ ಕಳೆದುಕೊಳ್ಳಲಿದ್ದಾರೆ ಎಂದು ಮಾಹಿತಿ ಲಭಿಸಿದೆ, ಇದರ ಜೊತೆಗೆ ಕರ್ನಾಟಕದಿಂದ ಆಯ್ಕೆಯಾಗಿರುವ ಓರ್ವ ಸಚಿವರನ್ನ ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿ ಘೋಷಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬರಲಾರಂಭಿಸಿವೆ.

ಜೂನ್ 15 ರಿಂದ 18 ರ ನಡುವೆ ಕೇಂದ್ರ ಸಚಿವ ಸಂಪುಟದ ಪ್ರಮುಖ ಪುನರ್ರಚನೆ ನಡೆಯುವ ಸಾಧ್ಯತೆ ಇದೆ. ನಿರ್ಣಾಯಕ ವಿಧಾನಸಭಾ ಚುನಾವಣೆಗಳಿಗೆ ಮುನ್ನ ಬಿಜೆಪಿ ನಾಯಕತ್ವವು ರಾಜಕೀಯ ಮತ್ತು ಸಾಂಸ್ಥಿಕ ಪುನರ್ರಚನೆಗೆ ಸಿದ್ಧವಾಗುತ್ತಿದೆ. ಹೀಗಾಗಿ ಹಲವಾರು ರಾಜ್ಯ ಸಚಿವರು ಸೇರಿದಂತೆ ಒಂದು ಡಜನ್‌ಗೂ ಹೆಚ್ಚು ಸಚಿವರನ್ನು ಕೈಬಿಡಬಹುದು ಅಥವಾ ಬದಲಾಯಿಸಬಹುದು ಎಂದು ಮೂಲಗಳು ತಿಳಿಸಿವೆ. ಕನಿಷ್ಠ ಇಬ್ಬರು ಕ್ಯಾಬಿನೆಟ್ ಸಚಿವರು ಮತ್ತು ಮೂವರು ರಾಜ್ಯ ಖಾತೆ ಕೇಂದ್ರ ಸಚಿವರುಗಳು ಸರ್ಕಾರದಿಂದ ಹೊರಬರುವ ನಿರೀಕ್ಷೆಯಿದೆ.

ಉತ್ತರ ಪ್ರದೇಶ ಮತ್ತು ಪಂಜಾಬ್‌ನಂತಹ ಚುನಾವಣೆ ನಡೆಯಲಿರುವ ರಾಜ್ಯಗಳನ್ನು ಗಮನದಲ್ಲಿಟ್ಟುಕೊಂಡು ಪುನರ್ರಚನೆಯನ್ನು ಯೋಜಿಸಲಾಗುತ್ತಿದ್ದು. ಈ ರಾಜ್ಯದವರಿಗೆ ಹೆಚ್ಚಿನ ಪ್ರಾತಿನಿಧ್ಯ ಲಭಿಸುವ ನಿರೀಕ್ಷೆ ಇದೆ. ಜೊತೆಗೆ NDA ಮಿತ್ರಪಕ್ಷಗಳಾದ JD(U), TDP, NCP ಮತ್ತು RLM ಗಳು ಸಂಪುಟದಲ್ಲಿ ಪ್ರಾತಿನಿಧ್ಯವನ್ನು ಪಡೆಯಬಹುದು ಎಂಬ ಊಹಾಪೋಹಗಳಿವೆ. 

ವರದಿಗಳ ಪ್ರಕಾರ ದಕ್ಷಿಣ ರಾಜ್ಯ, ಈಶಾನ್ಯ ಮತ್ತು ಉತ್ತರ ಪ್ರದೇಶದ ತಲಾ ಒಬ್ಬ ಸಚಿವರಿದ್ದಾರೆ. ಪ್ರಮುಖ ಖಾತೆಗಳನ್ನು ನಿರ್ವಹಿಸುವ ಹಲವಾರು ಹಿರಿಯ ಸಚಿವರ ಜವಾಬ್ದಾರಿಗಳಲ್ಲಿಯೂ ಬದಲಾವಣೆ ಕಾಣಬಹುದು. ರೈಲ್ವೆ, ಹಣಕಾಸು, ಕಾರ್ಪೊರೇಟ್ ವ್ಯವಹಾರಗಳು, ಕಲ್ಲಿದ್ದಲು, ಜವಳಿ, ಮಾಹಿತಿ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಗ್ರಾಮೀಣಾಭಿವೃದ್ಧಿ, ರಾಸಾಯನಿಕ ಮತ್ತು ರಸಗೊಬ್ಬರಗಳು, ಸಹಕಾರ, ಮೀನುಗಾರಿಕೆ, ಜಲಶಕ್ತಿ, ಕೃಷಿ, ಪರಿಸರ, ಕಾನೂನು ಮತ್ತು ಇತರ ಸಚಿವಾಲಯಗಳು ಬದಲಾವಣೆಗಳಿಗೆ ಸಾಕ್ಷಿಯಾಗುವ ಸಾಧ್ಯತೆ ಇದೆ.

ರಾಜ್ಯ ಬಿಜೆಪಿಗೆ ನೂತನ ಬಾಸ್‌..!

2028ರ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಕರ್ನಾಟಕ ಬಿಜೆಪಿಗೆ ನೂತನ ಅಧ್ಯಕ್ಷರನ್ನ ನೇಮಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದ್ದು. ಇತ್ತೀಚೆಗೆ ಬಿಜೆಪಿ ರಾಷ್ಟ್ರಧ್ಯಕ್ಷ ನಿತಿನ್‌ ನಬಿನ್‌ ರಾಜ್ಯಕ್ಕೆ ಭೇಟಿ ನೀಡಿ, ಪಕ್ಷದ ಹಿರಿಯರು ಮತ್ತು ಮುಖಂಡರ ಜೊತೆ ಸಭೆ ನಡೆಸಿರುವುದು ಈ ಸುದ್ದಿಗೆ ಹೆಚ್ಚು ಬಲ ತುಂಬುತ್ತಿದೆ. 

By Ravikumar - 30-05-2026


Ads in Post